ADVERTISEMENT

ಬ್ಯಾರಿ‌ ಅಕಾಡೆಮಿ‌ ಅಧ್ಯಕ್ಷರ ನೇಮಕ‌ ರದ್ದು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 7:07 IST
Last Updated 6 ಏಪ್ರಿಲ್ 2022, 7:07 IST
   

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ.‌ ತಕ್ಷಣದಿಂದ ‌ಜಾರಿಗೆ ಬರುವಂತೆ ರಹೀಂ ಉಚ್ಚಿಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ʼ'ಕಾರಣ ಏನೂ ಎಂಬುದು ತಿಳಿದಿಲ್ಲ. ಆದೇಶ ಬಂದ ಬಳಿಕವಷ್ಟೇ ನನಗೆ ವಿಷಯ ತಿಳಿಯಿತು. ಪಕ್ಷ ನನಗೆ ಎರಡು ಬಾರಿ ಅಕಾಡೆಮಿಯ ಅಧ್ಯಕ್ಷನಾಗಲು ಅವಕಾಶ ಕಲ್ಪಿಸಿದೆ. ಅದನ್ನು ಯಶಸ್ವಿಯಾಗಿ ಪೂರೈಸಿದ ತೃಪ್ತಿ ಇದೆ' ಎಂದು ರಹೀಂ ಉಚ್ಚಿಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.