ಕಾಸರಗೋಡು: ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಗೊತ್ತಿಲ್ಲದ ಮಲಯಾಳಿ ಶಿಕ್ಷಕರ ನೇಮಕಾತಿ ರದ್ದುಗೊಳಿಸಬೇಕೆಂದುಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎ. ಜಿ. ಸಿ .ಬಷೀರ್ ಅವರ ನೇತೃತ್ವದಲ್ಲಿ ಇಲ್ಲಿಗೆ ಶನಿವಾರ
ಭೇಟಿ ನೀಡಿದ್ದ ಶಿಕ್ಷಣ ಸಚಿವ ಸಿ. ರವೀಂದ್ರನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.
‘ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಮಲಯಾಳ ಬಾರದ ಅಭ್ಯರ್ಥಿಗಳ ರ್ಯಾಂಕ್
ಪಟ್ಟಿಯನ್ನು ತಕ್ಷಣವೇ ರದ್ದು ಗೊಳಿಸಬೇಕು, ಕನ್ನಡ ಮಾಧ್ಯಮ ಸೆಕೆಂಡರಿ ಪರೀಕ್ಷೆಯನ್ನು ಮಲಯಾಳಂ
ಭಾಷೆಯಲ್ಲಿ ನಡೆಸಲು ಕುತಂತ್ರ ನಡೆಸಲಾಗುತ್ತಿದ್ದು, ಈ ಪರೀಕ್ಷೆಯನ್ನು ಕನ್ನಡದಲ್ಲೇ ನಡೆಸಬೇಕು’ ಮುಂತಾದ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಶಾದ್ ವರ್ಕಾಡಿ , ಶಾನವಾಸ್
ಹಾಗೂ ಸದಸ್ಯ ಕೆ. ಶ್ರೀಕಾಂತ್ ಇದ್ದರು.
ಕನ್ನಡ ಮಾಧ್ಯಮ ಶಾಲೆಯಾದ ವರ್ಕಾಡಿಯ ಮೂಡಂಬೈಲ್ ಸರ್ಕಾರಿ ಕನ್ನಡ ಮಕ್ಕಳಿಗೆ ಪಾಠ ಕಲಿಸಲು ಮಲಯಾಳಿ ಶಿಕ್ಷಕರ ನೇಮಕಾತಿ ನಡೆಸಿದ ಬಗ್ಗೆ ಇರುವ ಹೋರಾಟ ಮುಂದುವರಿಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.