ADVERTISEMENT

ಕಾಂತಾವರ ದತ್ತಿನಿಧಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 21:13 IST
Last Updated 18 ನವೆಂಬರ್ 2020, 21:13 IST
ಮುರಳಿ ಕಡೆಕಾರು
ಮುರಳಿ ಕಡೆಕಾರು   

ಮಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಂಪತಿ ಕೆ. ಬಾಲಕೃಷ್ಣ ಆಚಾರ್ಯ ಮತ್ತು ವಾಣಿ ಬಿ.ಆಚಾರ್ಯ ಅವರ ನೆನಪಿನಲ್ಲಿ ಕಾಂತಾವರ ಕನ್ನಡ ಸಂಘ ನೀಡುವ ದತ್ತಿನಿಧಿ ಪ್ರಶಸ್ತಿಗೆ ಈ ಬಾರಿ ಉಡುಪಿಯ ನಿವೃತ್ತ ಮುಖ್ಯಶಿಕ್ಷಕ ಮುರಳಿ ಕಡೆಕಾರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 10 ಸಾವಿರ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನ
ವನ್ನು ಒಳಗೊಂಡಿದೆ. ಡಿಸೆಂಬರ್ 13ರಂದು ಕಾಂತಾವರ ಕನ್ನಡ ಸಂಘದ ಉಳಿದ ವಾರ್ಷಿಕ ಪ್ರಶಸ್ತಿಗಳ ಜೊತೆ ‍ಇದನ್ನೂ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ನಿರಂಜನ ಮೊಗಸಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT