ADVERTISEMENT

ಕರ್ಣಾಟಕ ಬ್ಯಾಂಕ್‌ಗೆ ಇಬ್ಬರು ಹೆಚ್ಚುವರಿ ನಿರ್ದೇಶಕರ ನೇಮಕ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 6:44 IST
Last Updated 20 ಆಗಸ್ಟ್ 2020, 6:44 IST
ನ್ಯಾ.ಎ.ವಿ. ಚಂದ್ರಶೇಖರ್‌
ನ್ಯಾ.ಎ.ವಿ. ಚಂದ್ರಶೇಖರ್‌   

ಮಂಗಳೂರು: ಕರ್ಣಾಟಕ ಬ್ಯಾಂಕ್‌ಗೆ ನ್ಯಾ ಎ.ವಿ. ಚಂದ್ರಶೇಖರ್ ಹಾಗೂ ಪ್ರದೀಪ್‌ಕುಮಾರ್ ಪಂಜ ಅವರನ್ನು ಹೆಚ್ಚುವರಿ ನಿರ್ದೇಶಕರನ್ನಾಗಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ನ್ಯಾ.ಎ.ವಿ. ಚಂದ್ರಶೇಖರ್ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನಿವೃತ್ತರಾಗಿದ್ದು, ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದ (ಕೆಎಸ್‍ಎಟಿ) ಸದಸ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರದೀಪ್ ಕುಮಾರ್ ಪಂಜ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಪೊರೇಟ್ ಬ್ಯಾಂಕಿಂಗ್ ವಿಭಾಗದ ಆಡಳಿತ ನಿರ್ದೇಶಕರಾಗಿ (ಎಂಡಿ) 2015ರಲ್ಲಿ ನಿವೃತ್ತರಾಗಿದ್ದಾರೆ. ಸದ್ಯ ವಿವಿಧ ಕಂಪನಿಗಳ ಆಡಳಿತ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ.

ಇಬ್ಬರು ನೂತನ ನಿರ್ದೇಶಕರ ನೇಮಕ ಕುರಿತು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಓ ಮಹಾಬಲೇಶ್ವರ ಎಂ.ಎಸ್. ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.