ADVERTISEMENT

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ವಿರುದ್ಧ ಕ್ರಮಕ್ಕೆ ಕಿರಿಕ್ ಕೀರ್ತಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 5:00 IST
Last Updated 7 ಆಗಸ್ಟ್ 2025, 5:00 IST
<div class="paragraphs"><p>ಕಿರಿಕ್ ಕೀರ್ತಿ </p></div>

ಕಿರಿಕ್ ಕೀರ್ತಿ

   

ಮಂಗಳೂರು: ‘ಎಸ್‌ಐಟಿ ತನಿಖೆ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕೀರ್ತಿ ಕುಮಾರ್‌ ಎಸ್‌.ಯು (ಕಿರಿಕ್‌ ಕೀರ್ತಿ) ಎಸ್‌ಐಟಿ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿಯಲ್ಲಿಯ ಎಸ್‌ಐಟಿ ಕಚೇರಿಗೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಯೂಟ್ಯೂಬರ್‌ಗಳು ಈ ಪ್ರಕರಣದ ತನಿಖೆ ಬಗ್ಗೆ ತಪ್ಪು ಮಾಹಿತಿ ನೀಡಿ ಜನರನ್ನು ದಾರಿತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.