ಮಂಗಳೂರು: ನಗರ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಿರುವ ಗೃಹರಕ್ಷಕ ದಳದ ಸಿಬ್ಬಂದಿಗೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ.ಮುರಳಿ ಮೋಹನ ಚೂಂತಾರು ಅವರ ಮೂಲಕ ಉಚಿತ ಕಿಟ್ ವಿತರಿಸಲಾಯಿತು.
ಕೇಂದ್ರ ಸರ್ಕಾರ ಆಯುಷ್ ಇಲಾಖೆಯಿಂದ ಅನುಮೋದಿಸಲಾದ ಔಷಧಿಗಳನ್ನು ಇದೇ ಸಂದರ್ಭದಲ್ಲಿ ಭಾರತೀಯ ಹೋಮಿಯೋಪತಿ ವೈದ್ಯರ ಸಂಘದಿಂದ ಉಚಿತವಾಗಿ ನೀಡಲಾಯಿತು.
ಮೇಯರ್ ದಿವಾಕರ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಚಾಲನೆ ನೀಡಿದರು. ಪದಾಧಿಕಾರಿಗಳಾದ ರೂಪ ಡಿ ಬಂಗೇರ, ಸುರೇಂದ್ರ ಜೆ., ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಗೃಹರಕ್ಷಕ ಉಪ ಕಮಾಂಡೆಂಟ್ ರಮೇಶ್, ಗೃಹರಕ್ಷಕ ಘಟಕಾಧಿಕಾರಿ ಮಾರ್ಕ್ ಶೆರಾ, ವೈದ್ಯರಾದ ಡಾ.ಪ್ರವೀಣ್ ಕುಮಾರ್ ರೈ, ಡಾ.ಅವಿನಾಶ್ ವಿ.ಎಸ್., ಡಾ. ಪ್ರವೀಣ್ ರಾಜ್ ಆಳ್ವ, ಡಾ. ಪ್ರಸನ್ನ ಕುಮಾರ್, ಡಾ. ರಾಮಕೃಷ್ಣ ರಾವ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.