ADVERTISEMENT

ಒಂದೇ ಸೂರಿನಡಿ ಮಂಡಿ, ಸೊಂಟದ ಆರೈಕೆ

ಕೆಎಂಸಿ ‘ಮೊಣಕಾಲು, ಸೊಂಟದ ಸಮಗ್ರ ಆರೈಕೆ’ ಕೇಂದ್ರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 11:56 IST
Last Updated 18 ಡಿಸೆಂಬರ್ 2019, 11:56 IST
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥ ಡಾ. ಎಚ್. ಎಸ್. ಬಲ್ಲಾಳ್ ಬುಧವಾರ ಮಾತನಾಡಿದರು.
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥ ಡಾ. ಎಚ್. ಎಸ್. ಬಲ್ಲಾಳ್ ಬುಧವಾರ ಮಾತನಾಡಿದರು.   

ಮಂಗಳೂರು: ಮಂಡಿ ಮತ್ತು ಸೊಂಟದ ಸಮಗ್ರ ಆರೈಕೆ ನೀಡುವ`ಮಂಡಿ (ಮೊಣಕಾಲು) ಮತ್ತು ಸೊಂಟದ ಆರೈಕೆಯ’ ಅತ್ಯಾಧುನಿಕ ಚಿಕಿತ್ಸಾ ಕೇಂದ್ರವನ್ನು ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಬುಧವಾರ ಸ್ವೀಡನ್‌ನ ಗೋದೆನ್‌ಬರ್ಗ್‌ನ ಪ್ರೊಫೆಸರ್ ಮ್ಯಾಟ್ಸ್ ಬ್ರಿಟ್‌ ಬರ್ಗ್ ಅವರು ಉದ್ಘಾಟನೆ ಮಾಡಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥ ಡಾ. ಎಚ್. ಎಸ್.ಬಲ್ಲಾಳ್ ಮಾತನಾಡಿ, ಮನುಷ್ಯನ ಕೀಲುಗಳ ಸಂರಕ್ಷಣೆಗೆ ಈ ಕೇಂದ್ರ ಅತ್ಯಂತ ಪೂರಕವಾಗಿದೆ. ದಕ್ಷಿಣ ಕೊರಿಯಾದ ಸಿಯೋಲ್‌ನ ಫ್ರೊಫೆಸರ್ ಸೀಕ್-ಜಂಗ್ ಕಿಮ್ ಮತ್ತು ಯುಕೆ ಕ್ಯಾಂಟರ್‌ಬರಿಯ ಪ್ರೊಫೆಸರ್ ಎ. ಅನಂತರಾಮ ಶೆಟ್ಟಿ ಅವರು ಕೋಶ ಚಿಕಿತ್ಸೆ ಅಭಿವೃದ್ಧಿ ಪಡಿಸಿದವರಾಗಿದ್ದಾರೆ ಎಂದು ಹೇಳಿದರು.

ನೂತನ ಕೇಂದ್ರದ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಮಂಡಿ(ಮೊಣಕಾಲು) ಮತ್ತು ಸೊಂಟದ ಚಿಕಿತ್ಸೆ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಆರೈಕೆ ಕೇಂದ್ರವನ್ನು ಆರಂಭಿಸಿರುವ ಹೆಮ್ಮೆ ಕೆಎಂಸಿಗೆ ಸಲ್ಲುತ್ತದೆ. ಈ ಚಿಕಿತ್ಸಾ ಕೇಂದ್ರದ ಮೂಲಕ ಮಂಡಿ ಮತ್ತು ಸೊಂಟದ ಕೀಲುಗಳಿಗೆ ಸಮಗ್ರ ಆರೈಕೆ ಮಾಡುವಂತಹ ವ್ಯವಸ್ಥೆಯನ್ನು ಒಂದೇ ಸೂರಿನಡಿ ಕಲ್ಪಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಪ್ರೊ.ಎ. ಅನಂತರಾಮ ಶೆಟ್ಟಿ ಅವರು ಮಾತನಾಡಿ, ಕೆಎಂಸಿ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ವಿಶಿಷ್ಟ ಆರೈಕೆ ಕೇಂದ್ರ ಆರಂಭಿಸಿರುವುದು ಈ ಭಾಗದ ಹೆಮ್ಮೆ. ಮಂಡಿ(ಮೊಣಕಾಲು) ಮತ್ತು ಸೊಂಟಕ್ಕೆ ಸಂಬಂಧಿಸಿದ ಚಿಕಿತ್ಸೆಗಳು ಇತ್ತೀಚಿನ ದಿನಗಳಲ್ಲಿ ಸುಲಭವಾಗುತ್ತಿದ್ದು, ಪ್ಯಾಕೇಜ್‌ ದರದಲ್ಲಿ ಶಸ್ತ್ರ ಚಿಕಿತ್ಸೆ ಮಾಡುವಂತಹ ವ್ಯವಸ್ಥೆ ಕೂಡಾ ಇದೆ. ತಂತ್ರಜ್ಞಾನದ ಬಳಕೆಯಿಂದಾಗಿ ಯಾವುದೇ ರೀತಿಯ ಶಸ್ತ್ರ ಚಿಕಿತ್ಸೆ ಮಾಡದೇ ಕೀಹೋಲ್ ಶಸ್ತ್ರಚಿಕಿತ್ಸೆಯ ಮೂಲಕ ಮಾಡುವ ವ್ಯವಸ್ಥೆ ಇದೆ ಎಂದು ಅವರು ಹೇಳಿದರು.

ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್‌ನ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಜೋಸ್, ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಆನಂದ್ ವೇಣುಗೋಪಾಲ್, ಪ್ರಾದೇಶಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಗೀರ್ ಸಿದ್ಧಿಕಿ, ಮೂಳೆ ರೋಗ ವಿಭಾಗ ಮತ್ತು ಬದಲಿ ಕೀಲು ಜೋಡಣೆ ಶಸ್ತ್ರಚಿಕಿತ್ಸಾ ಸಲಹಾ ತಜ್ಞ ಡಾ. ಸುರೇಂದ್ರ ಯು. ಕಾಮತ್, ಬದಲಿ ಸೊಂಟ ಮತ್ತು ಮಂಡಿ ಕೀಲು ಜೋಡಣೆ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಯೋಗೀಶ್ ಡಿ. ಕಾಮತ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.