ಮಂಗಳೂರು: ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಮುಖ್ಯಸ್ಥ ಟಿ.ವಿ.ಮೋಹನದಾಸ ಪೈ ಪ್ರಾಯೋಜಕತ್ವದ ‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರ -2020’ ಕ್ಕಾಗಿ ಗೋವಾದ ಕೊಂಕಣಿ ಲೇಖಕ ಕೆ.ಎಂ. ಸುಖತಣಕರ ಅವರ ‘ಘುಮಕ್ಯಾರ ಘುಮಕೆ’ ಕಾದಂಬರಿ ಆಯ್ಕೆಗೊಂಡಿದೆ.
‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಅತ್ಯುತ್ತಮ ಕೊಂಕಣಿ ಕವಿತಾ ಕೃತಿ ಪುರಸ್ಕಾರ-2020’ ಕ್ಕೆ ಮುಂಬೈನ ಶೈಲೇಂದ್ರ ಮೆಹತಾ ಅವರ ‘ಸಿಸಫಸ್ ತೆಂಗಸರ್’ ಕವನ ಸಂಕಲನ ಆಯ್ಕೆಯಾಗಿದೆ. ಹಿರಿಯ ಖ್ಯಾತ ಕೊಂಕಣಿ ಸಾಹಿತ್ಯಕಾರ ಕುಮಟಾದ ಡಾ. ಶಿವರಾಮ ಕಾಮತ್ ಅವರು ‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಪುರಸ್ಕಾರ-2020’ ಕ್ಕೆ ಆಯ್ಕೆಯಾಗಿದ್ದಾರೆ.
ಈ ಮೂರು ಪ್ರಶಸ್ತಿಗಳೂ ತಲಾ ₹1 ಲಕ್ಷ ನಗದು ಹಾಗೂ ಸನ್ಮಾನ ಪತ್ರ, ಸ್ಮರಣಿಕೆ ಒಳಗೊಂಡಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.