ADVERTISEMENT

ಬಿಜೆಪಿ ಗೆಲುವು ನಿಶ್ಚಿತ : ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2023, 16:16 IST
Last Updated 22 ಏಪ್ರಿಲ್ 2023, 16:16 IST
ಕೋಟ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು
ಕೋಟ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು   

ಉಳ್ಳಾಲ: ಮಂಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಯ ಆಯ್ಕೆ ನಡೆದಿದೆ. ಅಭ್ಯರ್ಥಿ ಗೆಲುವು ನಿಶ್ಚಿತ. ಜಿಲ್ಲೆಯ 8 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿ ನಡೆದ  ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ‘ಸಮಾಜದ ಕಟ್ಟಕಡೆಯ ವ್ಯಕ್ತಿ ವಿಶ್ವಾಸದ ಬಾಳು ನಡೆಸಬೇಕು ಅನ್ನುವ ಉದ್ದೇಶದಿಂದ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಮಂಗಳೂರು-ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಗುತ್ತಿರುವ ಸಮಸ್ಯೆ ಪರಿಹಾರಕ್ಕಾಗಿ ₹180 ಕೋಟಿ ನೀಡಿರುವುದು, ಹೆಜಮಾಡಿಯಲ್ಲಿ ಬಂದರು ಸ್ಥಾಪನೆ ಮೀನುಗಾರರಿಗೆ ನೀಡಿರುವ ಬಹುದೊಡ್ಡ ಕೊಡುಗೆಯಾಗಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ, ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಕ್ಷೇತ್ರ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರವಾಸಿ ಪ್ರಭಾರಿ ಕುಂಟಾರು ರವೀಶ್ ತಂತ್ರಿ, ಚುನಾವಣಾ ಉಸ್ತುವಾರಿ ಚೆನ್ನಪ್ಪ ಕೋಟ್ಯಾನ್, ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್ ಮುಂತಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.