ADVERTISEMENT

ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 7:06 IST
Last Updated 7 ಏಪ್ರಿಲ್ 2021, 7:06 IST
ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ
ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ   

ಮಂಗಳೂರು:ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಜಿಲ್ಲೆಯಲ್ಲೂ ಕೆಎಸ್‌ಆರ್‌ಟಿಸಿ, ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.

ನಗರದ ಬಸ್ ನಿಲ್ದಾಣದಲ್ಲಿ ಬಸ್ ಗಳು ಇಲ್ಲದೆ ಖಾಲಿ ಖಾಲಿಯಾಗಿದ್ದು, ಚಾಲಕ ನಿರ್ವಾಹಕರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಬಸ್‌ಗಾಗಿ ಬಸ್ ಸ್ಟ್ಯಾಂಡ್‌ನಲ್ಲಿ ಪ್ರಯಾಣಿಕರು ಕಾದು ಕುಳಿತಿರುವ ದೃಶ್ಯ ಸಾಮಾನ್ಯವಾಗಿದೆ.

ಸರ್ಕಾರಿ ಬಸ್ ಸೇವೆ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಹೆಚ್ಚಿನ ಪ್ರಯಾಣಿಕರು ಖಾಸಗಿ ಬಸ್ ಮೊರೆ ಹೋಗುತ್ತಿದ್ದಾರೆ.

ADVERTISEMENT

ಮುಂಜಾಗ್ರತಾ ಕ್ರಮವಾಗಿ ನಗರದ ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.