ಸುಬ್ರಹ್ಮಣ್ಯ: ಆಶ್ಲೇಷಾ ನಕ್ಷತ್ರವಾಗಿರುವ ಮಂಗಳವಾರ ನಾಗಾರಾಧನೆಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿದ್ದಾರೆ.
ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ ಜನರು ಸಾಲಿನಲ್ಲಿ ನಿಂತಿದ್ದರು.
ಆಶ್ಲೇಷಾ ನಕ್ಷತ್ರದ ದಿನ ಆಶ್ಲೇಷಾ ಬಲಿಯ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಳ್ಳುವುದು ಇಲ್ಲಿನ ಸಂಪ್ರದಾಯ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.