ಸುಬ್ರಹ್ಮಣ್ಯ: ಲಾಕ್ಡೌನ್ ಬಳಿಕ ಸೋಮವಾರದಂದು ದೇಗುಲಗಳಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದ್ದು, ನೂರಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆಯುತ್ತಿದ್ದಾರೆ.
ಬೆಳಿಗ್ಗೆ 8.30ರ ಮಹಾಪೂಜೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಸ್ಯಾನಿಟೈಸರ್, ಮಾಸ್ಕ್ ಹಾಗೂ ಅಂತರ ಕಾಪಾಡಿಕೊಂಡು ದರ್ಶನ ಮಾಡಿದರು. ದೇವರ ದರ್ಶನ ಬಿಟ್ಟು ಬೇರೆ ಯಾವುದೇ ಪೂಜೆ, ಸೇವೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.