ADVERTISEMENT

ಡಾ. ಕೆ.ವಿ. ರಾವ್ ಅವರಿಗೆ ‘ಕಾರಂತ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 3:55 IST
Last Updated 22 ಸೆಪ್ಟೆಂಬರ್ 2022, 3:55 IST
ಡಾ. ಕೆ.ವಿ. ರಾವ್
ಡಾ. ಕೆ.ವಿ. ರಾವ್   

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮತ್ತು ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿ ನೀಡುವ, 2022ನೇ ಸಾಲಿನ ‘ಕಾರಂತ ಪ್ರಶಸ್ತಿ’ಗೆ ಭೌತಶಾಸ್ತ್ರ ಪ್ರಾಧ್ಯಾಪಕ, ಸಂಶೋಧಕ, ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್‌ನ ನಿರ್ದೇಶಕ ಡಾ. ಕೆ.ವಿ. ರಾವ್ ಆಯ್ಕೆಯಾಗಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಅಕ್ಟೋಬರ್ 10ರಂದು ಮಂಗಳೂರಿನಲ್ಲಿ ಜರಗಲಿರುವ ಕಾರಂತ ಹುಟ್ಟುಹಬ್ಬದ ಅಚರಣೆಯ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT