ADVERTISEMENT

ಹಣತೆ ವ್ಯಾಪಾರಿ ಕೊಲೆ: ಮತ್ತೊಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 4:03 IST
Last Updated 25 ನವೆಂಬರ್ 2022, 4:03 IST

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬುವವರನ್ನು ಹಣದ ಆಸೆಗಾಗಿ ಕೊಲೆಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ ಮೂರ್ತಿ (45) ಎಂಬಾತನನ್ನು ಬಂದರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿಸಿರುವ ಹೂವಿನ ಹಡಗಲಿಯ ರವಿ ಯಾನೆ ವಕೀಲ್ ನಾಯ್ಕ ಎಂಬಾತ ನೀಡಿದ ಮಾಹಿತಿ ಆಧರಿಸಿ, ಮೂರ್ತಿಯನ್ನು ಬಂಧಿಸಲಾಗಿದೆ. ರವಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂರ್ತಿ ಕೂಡ ಈ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಯಾವೇಳ್ ಪೆರಿಯಸಾಮಿ ಬಳಿ ಸಾಕಷ್ಟು ಹಣವಿರಬಹುದು ಎಂದು ಭಾವಿಸಿದ್ದ ಆರೋಪಿ ರವಿ, ಮದ್ಯಸೇವಿಸಿ ಬಂಗ್ರಕುಳೂರಿನ ಮೈದಾನಕ್ಕೆ ಕರೆದೊಯ್ದು ಕೊಲೆಗೈದಿದ್ದ ಎನ್ನಲಾಗಿದ್ದು, ಕೃತ್ಯ ನಡೆದ 45 ದಿನಗಳ ಬಳಿಕ ಮೃತದೇಹ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT