ADVERTISEMENT

ಶಿಸ್ತುಬದ್ಧ ಕಂಬಳಕ್ಕೆ ಕಾನೂನು ಮಾನ್ಯತೆ: ಟಿ.ಬಿ.ಜಯಚಂದ್ರ

ಬಂಟ್ವಾಳ: ಮೂಡೂರು-ಪಡೂರು ಜೋಡುಕರೆ ಕಂಬಳ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2025, 12:55 IST
Last Updated 9 ಮಾರ್ಚ್ 2025, 12:55 IST
ಬಂಟ್ವಾಳ ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ರಾತ್ರಿ ನಡೆದ ಮೂಡೂರು-ಪಡೂರು ಕಂಬಳದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರನ್ನು ಸನ್ಮಾನಿಸಲಾಯಿತು
ಬಂಟ್ವಾಳ ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ರಾತ್ರಿ ನಡೆದ ಮೂಡೂರು-ಪಡೂರು ಕಂಬಳದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರನ್ನು ಸನ್ಮಾನಿಸಲಾಯಿತು   

ಬಂಟ್ವಾಳ: ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ನಡೆಸುತ್ತಿರುವ ಶಿಸ್ತುಬದ್ಧ ಕಂಬಳಕ್ಕೆ ನಾನು ಕಾನೂನು ಸಚಿವನಾಗಿದ್ದಾಗ ನಿಷೇಧ ಹೇರಲು ಒತ್ತಡ ಬಂದಿತ್ತು. ಆದರೆ, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕಂಬಳಾಭಿಮಾನಿಗಳ ಆಶಯದಂತೆ ಪುತ್ತೂರಿನ ಕೊಯಿಲಕ್ಕೆ ಪಶು ವೈದ್ಯಕೀಯ ಕಾಲೇಜು ಮತ್ತು ಕಂಬಳಕ್ಕೆ ಕಾನೂನು ಮಾನ್ಯತೆ ನೀಡಿ ನಿರಾತಂಕವಾಗಿ ಕಂಬಳ ನಡೆಸಲು ಸಾಧ್ಯವಾಗಿರುವುದು ಸಂತಸ ತಂದಿದೆ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ಇಲ್ಲಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ರಾತ್ರಿ ನಡೆದ 14ನೇ ವರ್ಷದ ಹೊನಲು ಬೆಳಕಿನ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಶಾಸಕರಾದ ಶರತ್ ಬಚ್ಚೇಗೌಡ, ಕೆ.ಮಂಜುನಾಥ ಭಂಡಾರಿ, ಅಶೋಕ್ ಕುಮಾರ್ ರೈ, ಪ್ರಮುಖರಾದ ವಿನಯ ಕುಮಾರ್ ಸೊರಕೆ, ಬೆಳಪು ದೇವಿಪ್ರಸಾದ್ ಶೆಟ್ಟಿ, ಪದ್ಮರಾಜ್ ಆರ್.ಪೂಜಾರಿ, ಮಿಥುನ್ ರೈ, ಮಮತಾ ಎಸ್.ಗಟ್ಟಿ, ಮೊಯ್ದಿನ್ ಬಾವ, ಬೇಬಿ ಕುಂದರ್, ಬಿ.ವಾಸು ಪೂಜಾರಿ ಲೊರೆಟ್ಟೊ, ಜಯಂತಿ ವಿ.ಪೂಜಾರಿ, ಶಶಿಧರ ಹೆಗ್ಡೆ, ನವೀನ ಡಿಸೋಜ, ಪ್ರವೀಣ್ ಚಂದ್ರ ಆಳ್ವ, ಅಶ್ವನಿ ಕುಮಾರ್ ರೈ, ಮಲ್ಲಿಕಾ ಪಕ್ಕಳ, ಜಗನ್ನಾಥ ಚೌಟ ಬದಿಗುಡ್ಡೆ, ದೇವಪ್ಪ ಕುಲಾಲ್, ಧನಭಾಗ್ಯ ಆರ್.ರೈ, ಶೈಲಜಾ ರಾಜೇಶ್, ಜೋಸ್ಪೀನ್ ಡಿಸೋಜ, ರೋಹಿತ್ ಹೆಗ್ಡೆ ಎರ್ಮಾಳ್‌, ಬಾರ್ಕೂರು ಶಾಂತಾರಾಮ ಶೆಟ್ಟಿ, ಚಂದ್ರಹಾಸ ಶೆಟ್ಟಿ ಪುತ್ತೂರು, ಪ್ರಶಾಂತ ಕಾಜವ, ಎಂ.ಎಸ್.ಮಹಮ್ಮದ್, ಇಬ್ರಾಹಿಂ ನವಾಜ್ ಬಡಕಬೈಲು, ಬಿ.ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರಾಜೀವ ಶೆಟ್ಟಿ ಎಡ್ತೂರು, ಪಿಲಿಫ್ ಫ್ರಾಂಕ್, ಕೆ.ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಭಂಡಾರಿ, ಬಿ.ಆರ್.ಅಂಚನ್, ಕೆ.ಪದ್ಮನಾಭ ರೈ, ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಉಮೇಶ ಕುಮಾರ್ ನಾವೂರು, ರಾಜೇಶ್ ರಾಡ್ರಿಗಸ್, ಪ್ರವೀಣ್ ರಾಡ್ರಿಗಸ್, ಚಿತ್ತರಂಜನ್ ಶೆಟ್ಟಿ, ಮಹಮ್ಮದ್ ನಂದಾವರ, ಗಣೇಶ ಪೂಜಾರಿ ವಗ್ಗ, ವೆಂಕಪ್ಪ ಪೂಜಾರಿ, ಶಬೀರ್ ಸಿದ್ಧಕಟ್ಟೆ, ಡೆಂಜಿಲ್ ನೊರೋನ ಭಾಗವಹಿಸಿದ್ದರು.

ಜಿಲ್ಲಾ ಕಂಬಳ ಸಮಿತಿ ಸಂಚಾಲಕ ಗುಣಪಾಲ ಕಡಂಬ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.