ADVERTISEMENT

ದಕ್ಷಿಣ ಕನ್ನಡ: ಕಲ್ಲೇರಿ ವಿದ್ಯುತ್ ಹರಿದು ಪವರ್‌ಮೆನ್‌ ಸಾವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 16:20 IST
Last Updated 27 ಜೂನ್ 2020, 16:20 IST
ಬಸವರಾಜ್.
ಬಸವರಾಜ್.   

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಲ್ಲೇರಿಯಲ್ಲಿ ಪವರ್‌ಮೆನ್‌ ಬಸವರಾಜ್ (25) ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಹರಿದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವರಾಜ್‌ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನವರು.

ನಾಲ್ಕೂವರೆ ವರ್ಷದಿಂದ ಕಲ್ಲೇರಿ ಮೆಸ್ಕಾಂ ಉಪ ವಿಭಾಗದಲ್ಲಿ ಪವರ್‌ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಿಗ್ಗೆ ಕೊಡಂ ಎಂಬಲ್ಲಿ ವಿದ್ಯುತ್ ಲೈನ್‌ನ ಜಿಒಎಸ್ ಚಾರ್ಚ್‌ಗೆ ಮುಂದಾಗಿದ್ದ ವೇಳೆ ಈ ಘಟನೆ ನಡೆದಿದೆ.

ADVERTISEMENT

ಅವಿವಾಹಿತರಾಗಿದ್ದು, ಒಂದು ತಿಂಗಳ ಹಿಂದೆಯಷ್ಟೇ ಅವರ ತಾಯಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.