ಸುಳ್ಯ: ಕೇರಳದ ಪಾಣತ್ತೂರು ಕಲ್ಲಪಳ್ಳಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
ಮೋಹನ್,ಬಾಬು, ಚೆಂಗಪ್ಪ, ನಾರಾಯಣ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಲಾರಿಗೆ ಮರದ ದಿಮ್ಮಿಗಳನ್ನು ಲೋಡ್ ಮಾಡಿದ್ದ ಕಾರ್ಮಿಕರು ಲಾರಿಯಲ್ಲಿ ಹೋಗುತ್ತಿರುವಾಗ ಲಾರಿ ಬ್ರೇಕ್ ವಿಫಲತೆಯಿಂದಾಗಿ ಇಳಿಜಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಲಾರಿ ಕೆಳ ಭಾಗದಲ್ಲಿ ಇದ್ದ ಮನೆಗೆ ಡಿಕ್ಕಿ ಹೊಡೆದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.