ಉಜಿರೆ: ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಕಡಿಮೆ ವೆಚ್ಚದಲ್ಲಿ ಹೆಚ್ಚು ಆದಾಯ ಪಡೆದು ಕೃಷಿಯಲ್ಲಿ ಲಾಭಗಳಿಸಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳ ದೇವಸ್ಥಾನದ ಬಳಿ ಇರುವ ಗದ್ದೆಯಲ್ಲಿ ಬುಧವಾರ ಯಂತ್ರದ ಮೂಲಕ ಪೈರು ಕಟಾವಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೂಲಿ ಕಾರ್ಮಿಕರ ಕೊರತೆಯ ಇಂದಿನ ಕಾಲದಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯವಾಗಿದೆ. ಇದರಿಂದಾಗಿ ಸಮಯ ಹಾಗೂ ಶ್ರಮದ ಉಳಿತಾಯವಾಗಿ ಕೃಷಿ ಲಾಭದಾಯಕವಾಗುತ್ತದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಯೋಜನಾಧಿಕಾರಿ ಸುಧೀರ್ ಜೈನ್, ಪ್ರಬಂಧಕ ಸಚಿನ್, ರಾಜೇಂದ್ರ ರೈ, ಸುದರ್ಶನ್, ಹರಿಪ್ರಸಾದ್, ಶಾಂತ, ಹೇಮಾವತಿ ವಿ.ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಕಿಯೋಸ್ಕ್ ಅಧಿಕಾರಿಗಳು, ಬ್ಯಾಂಕ್ ಆಫ್ ಬರೋಡದ ಪ್ರಾದೇಶಿಕ ಪ್ರಬಂಧಕ ಕಿರಣ್ ರೆಡ್ಡಿ, ಪ್ರಬಂಧಕ ವಿಜಯ ಪಾಟೀಲ್ ಇದ್ದರು. ಉಜಿರೆಯ ಪೂರಣ್ ವರ್ಮ ಸೇವಾಕೇಂದ್ರ ಸಂಯೋಜನೆಯಲ್ಲಿ ಸಹಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.