ADVERTISEMENT

ಉಳ್ಳಾಲ: ಹರೇಕಳದಲ್ಲಿ ಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 10:53 IST
Last Updated 18 ಸೆಪ್ಟೆಂಬರ್ 2022, 10:53 IST
ಹರೇಕಳದಲ್ಲಿ ಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ
ಹರೇಕಳದಲ್ಲಿ ಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ   

ಉಳ್ಳಾಲ (ದಕ್ಷಿಣ ಕನ್ನಡ): ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಬಾಲಕನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿದ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

11ವರ್ಷದ ಬಾಲಕ ಶನಿವಾರ ಸಂಜೆ ಮದರಸಕ್ಕೆ ತೆರಳಿದ್ದಾಗ ಶಿಕ್ಷಕ ಉಸ್ತಾದ್ ಯಹ್ಯಾ ಫೈಝಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಬಾಲಕನ ಪೋಷಕರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲನ್ಯಾಯ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.