ಬೆಳ್ತಂಗಡಿ: ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ.
ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್ ಶೆಟ್ಟಿ ಅವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಒಳಗಡೆ ಬಿಸಾಡಿದ ಮಗುವಿನ ಬಟ್ಟೆಯೊಂದನ್ನು ಸುಮಾರು 4.5 ಉದ್ದದ ನಾಗರ ಹಾವು ನುಂಗಿದ್ದು, ಕೊನೆಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದಾಗ ಮನೆಯವರು ನೋಡಿ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಹಾವಿನ ಬಾಯಿಯಿಂದ ಬಟ್ಟೆ ಹೊರತೆಗೆದು ರಕ್ಷಣೆ ಮಾಡಿ ನಂತರ ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.