ಮಂಗಳೂರು: ನಗರದ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್, ಮಾರುವೇಷದಲ್ಲಿ ಮಂಗಳೂರಿನಿಂದ ಲಾರಿಯಲ್ಲಿ ಬೆಂಗಳೂರಿಗೆ ತೆರಳಿದ್ದ ಎಂದು ತಿಳಿದು ಬಂದಿದೆ.
ನಗರದ ಚಿಲಿಂಬಿಯಲ್ಲಿ ವಾಸಿಸುತ್ತಿದ್ದ ಆದಿತ್ಯ ರಾವ್, ಕೆಲ ದಿನಗಳ ಹಿಂದೆ ಹೋಟೆಲ್ ನಲ್ಲಿ ಬಿಲ್ಲಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿದ್ದ. ಹೋಟೆಲ್ನಲ್ಲಿಯೇಬಾಂಬ್ ತಯಾರಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ.
ಹೋಟೆಲ್ ಸಿಬ್ಬಂದಿಯನ್ನು ವಿಚಾರಿಸಿದಾಗ ಈ ಎಲ್ಲ ಮಾಹಿತಿ ಬಹಿರಂಗವಾಗಿವೆ. ಆನ್ಲೈನ್ ಮೂಲಕ ಪೌಡರ್ ತರಿಸಿದ್ದು, ಅದರಿಂದ ಬಾಂಬ್ ತಯಾರಿಸಿದ್ದ. ಹೋಟೆಲ್ನರೂಮ್ನಲ್ಲಿಬಾಂಬ್ ತಯಾರಿಕೆಗೆ ಬಳಸಿದ್ದ ಪೌಡರ್ ಪತ್ತೆಯಾಗಿದೆ.
ವಿಚಿತ್ರವಾಗಿ ವರ್ತಿಸುತ್ತಿದ್ದಆದಿತ್ಯ ರಾವ್, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ತನ್ನಷ್ಟಕ್ಕೆ ಇರುತ್ತಿದ್ದ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ.
ಬಾಂಬ್ ಪ್ರಕರಣದ ಕುರಿತಂತೆ ಸಿಸಿಟಿವಿ ದೃಶ್ಯಾವಳಿ ಹಾಗೂ ಶಂಕಿತನ ಫೋಟೊ ಬಿಡುಗಡೆ ಮಾಡಿದ್ದ ಪೊಲೀಸರು, ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದರು. ಎಲ್ಲ ಆಯಾಮಗಳಿಂದ ತನಿಖೆ ನಡೆಸಿದಾಗ, ಆದಿತ್ಯರಾವ್ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿತ್ತು.
ತನ್ನ ಬಂಧನಬಹುತೇಕ ಖಚಿತ ಎನ್ನುವ ಪರಿಸ್ಥಿತಿ ಸೃಷ್ಟಿಯಾದ ನಂತರಬೆಂಗಳೂರಿಗೆ ಪರಾರಿಯಾಗಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.