ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಬಾಂಬ್ ಪ್ರಕರಣವನ್ನುಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಶಾಸಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ವ್ಯಕ್ತಿಯನ್ನು ಬಂಧನ ಮಾಡಿದ್ದು, ಈ ವ್ಯಕ್ತಿ ಬಾಂಬ್ ಇಟ್ಟು ಮಂಗಳೂರಿನಿಂದ ಬೆಂಗಳೂರಿಗೆ ಹೋಗಿ ತಲುಪಿದ್ದಾನೆ. ಪೊಲೀಸ್ ಇಲಾಖೆಯವರು ಅಲ್ಲಿಯವರೆಗೂಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದರು.
ಸಮುದಾಯಗಳ ನಡುವೆ ಕಂದಕ ಸೃಷ್ಟಿ ಉಂಟುಮಾಡುವ ಇಂತಹ ಘಟನೆಗಳನ್ನು ಸರಕಾರ ಕೂಡಲೇ ಮಟ್ಟಹಾಕಬೇಕು. ಈ ಕೃತ್ಯದಲ್ಲಿ ಕಾಣದ ಕೈಗಳಿವೆಅವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಖಾದರ್ ಅವರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.