ADVERTISEMENT

ಕುಸಿದ ಗುಡ್ಡ: ಮಣ್ಣಿನಲ್ಲಿ ಮಕ್ಕಳು‌ ಸಿಲುಕಿರುವ ಶಂಕೆ

ಮಂಗಳೂರು

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 10:07 IST
Last Updated 5 ಜುಲೈ 2020, 10:07 IST
ಕೈಕಂಬ ಬಂಗ್ಲಗುಡ್ಡೆಯಲ್ಲಿ ಕುಸಿದ ಗುಡ್ಡ
ಕೈಕಂಬ ಬಂಗ್ಲಗುಡ್ಡೆಯಲ್ಲಿ ಕುಸಿದ ಗುಡ್ಡ   

ಮಂಗಳೂರು: ಇಲ್ಲಿನ ಕೈಕಂಬ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮೂರು ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದ್ದು, ಹಲವು ಮನೆಗಳು ಅಪಾಯದಲ್ಲಿದೆ.

ಮುಂಜಾನೆಯಿಂದ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು ಮಣ್ಣಿನ ಅಡಿಯಲ್ಲಿ ಮಕ್ಕಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಸುಮಾರು200 ರಿಂದ 250 ರಷ್ಟು ಮಂದಿ ಸ್ಥಳದಲ್ಲಿ ಸೇರಿದ್ದು ಸಾರ್ವಜನಿಕರು ಸ್ಥಳಕ್ಕೆ ಬರದಂತೆ ಪೊಲೀಸರು ತೆರಳಿ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಅಲ್ಲಿ ವಾಸವಿರುವವರನ್ನು ಸ್ಥಳಾಂತರ ಮಾಡುವಂತಹ ಕ್ರಮವನ್ನು ಕೂಡಾ ಕೈಗೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.