ADVERTISEMENT

ಕೂಳೂರು ಸೇತುವೆಗೆ ಡಾಂಬರು ಹಾಕಿಸಿದ ಎಂಜಿನಿಯರ್‌ಗೆ ಶುಭಾಶಯವಿಲ್ಲ!

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 5:21 IST
Last Updated 16 ಸೆಪ್ಟೆಂಬರ್ 2022, 5:21 IST
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸಂದೇಶ
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸಂದೇಶ   

ಮಂಗಳೂರು: ‘ಕೂಳೂರು ಸೇತುವೆಗೆ ಡಾಂಬರು ಹಾಕಿಸಿದ ಎಂಜಿನಿಯರ್ ಒಬ್ಬರನ್ನು ಬಿಟ್ಟು ಉಳಿದ ಎಲ್ಲ ಎಂಜಿನಿಯರ್‌ಗಳಿಗೆ ಎಂಜಿನಿಯರ್ಸ್‌ ದಿನದ ಶುಭಾಶಯಗಳು’ ಎಂಬ ಸಂದೇಶವೊಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಎಲ್ಲರ ಗಮನ ಸೆಳೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರು ಸೇತುವೆ ಮೇಲಿನ ಗುಂಡಿಗಳ ಮುಚ್ಚಲು ಹಾಕಿದ್ದ ಡಾಂಬರು ಹತ್ತೇ ದಿನಗಳಲ್ಲಿ
ಕಿತ್ತುಹೋಗಿತ್ತು.ಇದುಸಾರ್ವಜನಿಕವಲಯದಲ್ಲಿಚರ್ಚೆಗೆಕಾರಣವಾಗಿ, ಮತ್ತೆ ದುರಸ್ತಿ ಕಾರ್ಯ ನಡೆದಿದೆ. ಸಾರ್ವಜನಿಕರೊಬ್ಬರು ಅದನ್ನು ಉಲ್ಲೇಖಿಸಿಎಂಜಿನಿಯರ್ಸ್‌ ದಿನದ ಶುಭಾಶಯಗಳನ್ನು ಈ ರೀತಿ ವಿಭಿನ್ನವಾಗಿ ಕೋರಿದ್ದಾರೆ.

ಕೆಲ ವರ್ಷಗಳ ಹಿಂದೆ ಪಂಪ್‌ವೆಲ್‌ ಮೇಲ್ಸೇತುವೆಯ ಕಾಮಗಾರಿಯ ಎಂಜಿನಿಯರ್‌ ಅನ್ನು ಉಲ್ಲೇಖಿಸಿ ಇದೇ ರೀತಿ ಶುಭಾಶಯ ಕೋರಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.