ADVERTISEMENT

ಮಂಗಳೂರು: ಅಟೋಮೊಬೈಲ್ ಅಂಗಡಿಗೆ ಬೆಂಕಿ, ದುಷ್ಕರ್ಮಿಗಳ ಕೃತ್ಯ ಶಂಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 4:27 IST
Last Updated 17 ಜನವರಿ 2020, 4:27 IST
ಅಂಗಡಿ ಮುಂಭಾಗ ಸುಟ್ಟು ಕರಕಲಾಗಿರುವ ವಸ್ತುಗಳು
ಅಂಗಡಿ ಮುಂಭಾಗ ಸುಟ್ಟು ಕರಕಲಾಗಿರುವ ವಸ್ತುಗಳು   

ಮಂಗಳೂರು: ನಗರ ಹೊರವಲಯದ ದೇರಳಕಟ್ಟೆಯಲ್ಲಿ ಅಟೋಮೊಬೈಲ್ ಅಂಗಡಿಯಲ್ಲಿ ಬೆಂಕಿ ಅನಾಹುತ ನಡೆದಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ.

ಸುರೇಶ್ ರೈ ಅವರ ಭಾರತ್ ಅಟೋಮೊಬೈಲ್ ಅಂಗಡಿಯಲ್ಲಿ ದುರ್ಘಟನೆ ನಡೆದಿದೆ. ಸುರೇಶ್ ರೈ ಅವರು ಗುರುವಾರ ರಾತ್ರಿ ಬೀಗ ಹಾಕಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಬಂದು ನೋಡಿದಾಗ ಬೆಂಕಿಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಈಚೆಗೆ ದೇರಳಕಟ್ಟೆ ಪರಿಸರದಲ್ಲಿ ಪ್ರತಿಭಟನೆಗೆ ತಂದಿದ್ದ ಕುರ್ಚಿಗಳನ್ನು ಸಾಗಿಸಲು ನಿಂತಿದ್ದ ಲಾರಿಗೆ ಬೆಂಕಿ‌ಹತ್ತಿಕೊಂಡಿತ್ತು. ಬೆಂಕಿ ಹಾಕಿರುವ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ‌ ಕೆಲ ಸಂಘಟನೆಗಳು ಎಚ್ಚರಿಕೆ ನೀಡಿದ್ದವು.‌

ಪೊಲೀಸರ ಮನವಿಯ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.