ADVERTISEMENT

ಎರಡು ವಿಮಾನಗಳಲ್ಲಿ 291 ಮಂದಿ ತವರಿಗೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:54 IST
Last Updated 14 ಜುಲೈ 2020, 17:54 IST

ಮಂಗಳೂರು: ಲಾಕ್‌ಡೌನ್‌ ಮತ್ತು ಉದ್ಯೋಗ ನಷ್ಟದಿಂದ ಸೌದಿ ಅರೇಬಿಯಾ ಹಾಗೂ ಮಸ್ಕತ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 291 ಜನರು ಎರಡು ವಿಮಾನಗಳಲ್ಲಿ ಮಂಗಳವಾರ ಮಂಗಳೂರಿಗೆ ಮರಳಿದ್ದಾರೆ.

ಸೌದಿ ಅರೇಬಿಯಾದ ಕೆಎಂಟಿ ಕಂಪನಿ ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ 180 ಜನರು ಬಂದಿದ್ದಾರೆ. ಬೆಳಿಗ್ಗೆ 6.30ಕ್ಕೆ ದಮ್ಮಾಮ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮಧ್ಯಾಹ್ನ 1.30ಕ್ಕೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ನಡಿ ಮಸ್ಕತ್‌ನಿಂದ ಹೊರಟ ವಿಮಾನ ಬೆಂಗಳೂರು ಮಾರ್ಗವಾಗಿ ಮಂಗಳವಾರ ರಾತ್ರಿ 10.45ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನಕ್ಕೆ ಬಂದಿಳಿಯಿತು. ಈ ವಿಮಾನದಲ್ಲಿ ಕರಾವಳಿಯ 111 ಜನರು ತವರಿಗೆ ಹಿಂದಿರುಗಿದರು.

ADVERTISEMENT

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್‌ ನೇತೃತ್ವದ ಅಧಿಕಾರಿಗಳ ತಂಡ ಎಲ್ಲ ಪ್ರಯಾಣಿಕರ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ ಎಲ್ಲ 291 ಜನರನ್ನೂ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.