ADVERTISEMENT

ಮಂಗಳೂರು ಗೋಲಿಬಾರ್ ಪ್ರಕರಣ: ನ್ಯಾಯಾಂಗ ತನಿಖೆ ಆರಂಭ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2019, 8:51 IST
Last Updated 30 ಡಿಸೆಂಬರ್ 2019, 8:51 IST
   

ಮಂಗಳೂರು:ನಗರದಲ್ಲಿ ಡಿಸೆಂಬರ್ 19ರಂದು ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಕುರಿತು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭಿಸಿದರು.

ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರ, ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆಗೂ ಆದೇಶ ಹೊರಡಿಸಿತ್ತು. ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರೊಂದಿಗೆ ಸಮಾಲೋಚನೆ ನಡೆಸಿದ ಜಗದೀಶ್, ವಿಚಾರಣೆ ಆರಂಭಿಸಿದರು.

ಪ್ರತಿಭಟನೆ ನಡೆದ ಸ್ಟೇಟ್ ಬ್ಯಾಂಕ್ ವೃತ್ತ, ಗಲಭೆ ಮತ್ತು ಗೋಲಿಬಾರ್ ನಡೆದಿದ್ದ ನೆಲ್ಲಿಕಾಯಿ ರಸ್ತೆ, ಬಂದರು ಪೊಲೀಸ್ ಠಾಣೆ ಮತ್ತು ಬಂದರು ಪ್ರದೇಶಗಳಿಗೆ ಭೇಟಿ ನೀಡಿದ ಅವರು ಮಾಹಿತಿ ಸಂಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.