ADVERTISEMENT

ಪೊಲೀಸರ ಮೇಲೆ‌ ದಾಳಿಗೆ ಯತ್ನ: ರೌಡಿ ಮೇಲೆ ಗುಂಡು ಹಾರಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 29 ಮೇ 2019, 4:30 IST
Last Updated 29 ಮೇ 2019, 4:30 IST
   

ಮಂಗಳೂರು: ಬಂಧಿಸಲು ಬಂದ ಪೊಲೀಸರ ಮೇಲೆ ದಾಳಿ ಮಾಡಿದ ನಟೋರಿಯಸ್ ರೌಡಿ ಉಮ್ಮರ್ ಫಾರೂಕ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಕಾನ್‌ಸ್ಟೆಬಲ್ ಸಂದೀಪ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಬೇಕಾಗಿದ್ದ ಉಮ್ಮರ್ ಫಾರೂಕ್‌ನನ್ನು ಬಂಧಿಸಲು ಮಂಗಳವಾರ ತಡರಾತ್ರಿ ಪೊಲೀಸ್ ತಂಡ ನಗರದ ಹೊರ ವಲಯದ ಪಚ್ಚನಾಡಿಗೆ ತೆರಳಿತ್ತು. ಈ ಸಂದರ್ಭ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಶರಣಾಗುವಂತೆ ಪೊಲೀಸರು ಮನವಿ ಮಾಡಿದರೂ ಆತ ಪ್ರತಿರೋಧ ಒಡ್ಡಿದ್ದಾನೆ. ಅಂತಿಮವಾಗಿ ಆತನ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.

ADVERTISEMENT

ಕೆಲವು ದಿನಗಳ ಹಿಂದೆ ನಟೋರಿಯಸ್ ರೌಡಿ ಗೌರೀಶ್‌ನನ್ನು ಬಂಧಿಸಲು ಹೋದಾಗ ಜಪ್ಪಿನಮೊಗರು ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಆತನ ಮೇಲೂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.