ಪ್ರಕಾಶ್ ಶೆಟ್ಟಿ, ರೊನಾಲ್ಡ್ ಕೊಲಾಸೊ, ತುಂಬೆ ಮೊಯಿದ್ದೀನ್
ಮಂಗಳೂರು: ಎಂಆರ್ಜಿ ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸಂಸ್ಥಾಪಕ ತುಂಬೆ ಮೊಯಿದ್ದೀನ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
ಶನಿವಾರ (ಜೂನ್ 15) ಮಧ್ಯಾಹ್ನ 12.15ಕ್ಕೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.