ADVERTISEMENT

ದಕ್ಷಿಣ ಕನ್ನಡ: ಕಣದಿಂದ ಹಿಂದೆ ಸರಿದ ಎಂಎನ್ಆರ್

ಸಹಕಾರ ಸಚಿವರ ಎಚ್ಚರಿಕೆಯ ಬೆನ್ನಲ್ಲೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 18:03 IST
Last Updated 20 ನವೆಂಬರ್ 2021, 18:03 IST
ರಾಜೇಂದ್ರಕುಮಾರ್‌
ರಾಜೇಂದ್ರಕುಮಾರ್‌   

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ ಚುನಾವಣೆಗೆ
ಸ್ಪರ್ಧಿಸುವುದಾಗಿ ಹೇಳುವ ಮೂಲಕ ಕುತೂಹಲ ಸೃಷ್ಟಿಸಿದ್ದ ದಕ್ಷಿಣ ಕನ್ನಡ ಕೇಂದ್ರ ಸಹಕಾರ ಬ್ಯಾಂಕ್‌ (ಎಸ್‌ಸಿಡಿಸಿಸಿ) ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಇದೀಗ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

‘ರಾಜಕೀಯ ಪ್ರವೇಶದಿಂದ ಸಹಕಾರಿಗಳಿಂದ ದೂರ ಉಳಿಯುವ ಸಾಧ್ಯತೆ ಇದೆ. ನಾನು ಸಹಕಾರಿ ನಾಯಕನಾಗಿಯೇ ಇರಬೇಕು. ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ. ಸಹಕಾರ ಕ್ಷೇತ್ರದಿಂದಲೇ ಗುರುತಿಸಿಕೊಳ್ಳಬೇಕು. ಸಹಕಾರ ಕ್ಷೇತ್ರಕ್ಕೆ ನನ್ನಿಂದಾಗುವ ಉತ್ತಮ ಕೆಲಸ ಮುಂದುವರಿಸುವ ಉದ್ದೇಶವಿದೆ. ಹಾಗಾಗಿ ಸಹಕಾರಿಗಳ ಆಶಯಕ್ಕೆ ಸ್ಪಂದಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ’ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT