ADVERTISEMENT

ನಾಳೆ ಹರಿಲೀಲಾ ಯಕ್ಷಗಾನ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 5:46 IST
Last Updated 11 ನವೆಂಬರ್ 2022, 5:46 IST
   

ಮೂಡುಬಿದಿರೆ: ಯಕ್ಷಗಾನದ ಗುರುದಂಪತಿ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯರ ಹೆಸರಿನಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ನೀಡಲಾಗುವ ಹರಿಲೀಲಾ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ 3 ಗಂಟೆಗೆ ಅಲಂಗಾರು ದೇವಸ್ಥಾನದಲ್ಲಿ ನಡೆಯಲಿದೆ.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಜಿ.ಎಲ್ ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಮದ್ದಳೆಗಾರ ನಾರಾಯಣ ಭಟ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಹರಿನಾರಾಯಣದಾಸ ಅಸ್ರಣ್ಣ ಆಶೀರ್ವಚನ ನೀಡುವರು. ಮದ್ದಳೆಗಾರ, ಕರ್ನಾಟಕ ಬ್ಯಾಂಕ್ ಅಧಿಕಾರಿ ಕೃಷ್ಣಪ್ರಕಾಶ್ ಉಳಿತ್ತಾಯ, ಉದ್ಯಮಿ ಶ್ರೀಪತಿ ಭಟ್ ಭಾಗವಹಿಸುವರು. ಸಂಜೆ 5ರಿಂದ ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್ ನಿರ್ದೇಶನದಲ್ಲಿ ಬಜಪೆ ತಲಕಳದ ಶ್ರೀಶ ಯಕ್ಷ ಕಲಿಕಾ ಕೇಂದ್ರದ ಮಕ್ಕಳಿಂದ ಹೊಸ್ತೋಟ ಮಂಜುನಾಥ ಭಾಗವತ ವಿರಚಿತ `ಶ್ರೀ ಶಿವಲೀಲಾ' ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಡಿಜಿ ಯಕ್ಷ ಫೌಂಡೇಶನ್ನಿನ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT