ADVERTISEMENT

ಮಂಗಳೂರು: ಕಸಾಯಿಖಾನೆ, ಮಾಂಸದ ಅಂಗಡಿ ಪರಿಶೀಲಿಸಿದ‌ ಮೇಯರ್

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 8:45 IST
Last Updated 14 ಅಕ್ಟೋಬರ್ 2020, 8:45 IST
ಮಾಂಸದ ಅಂಗಡಿಯ ಸಂಗ್ರಹ ಕೇಂದ್ರದಲ್ಲಿ ಪರಿಶೀಲನೆ ನಡೆಸಿದ ಮಂಗಳೂರು ಮೇಯರ್‌ ಮತ್ತು ತಂಡ
ಮಾಂಸದ ಅಂಗಡಿಯ ಸಂಗ್ರಹ ಕೇಂದ್ರದಲ್ಲಿ ಪರಿಶೀಲನೆ ನಡೆಸಿದ ಮಂಗಳೂರು ಮೇಯರ್‌ ಮತ್ತು ತಂಡ   

ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಪೊಲೀಸರು ಹಿಡಿದಿರುವುದು ಹಾಗೂ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ನಗರದ ವಿವಿಧ ಮಾರುಕಟ್ಟೆಗಳಿಗೆ ತೆರಳಿ ಪರಿಶೀಲಿಸಿದರು.

ಉರ್ವಸ್ಟೋರ್, ಉರ್ವ ಮಾರ್ಕೆಟ್‌ಗಳಲ್ಲಿ ಕಸಾಯಿಖಾನೆ, ಮಾಂಸದ ಅಂಗಡಿಗಳನ್ನು ಪರಿಶೀಲಿಸಲಾಯಿತು. ಅಕ್ರಮವಾಗಿ ಮಾರಾಟ ಕಂಡುಬಂದಲ್ಲಿ ಪರವಾನಗಿ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.

ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಪಾಲಿಕೆ ಸದ್ಯಸರಾದ ಸುಧೀರ್ ಶೆಟ್ಟಿ ಹಾಗೂ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.