ಮಂಗಳೂರು: ಐಪಿಎಸ್ ಅಧಿಕಾರಿ ಡಾ.ಪಿ.ಎಸ್.ಹರ್ಷ ಅವರನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಹುದ್ದೆಯಿಂದ ವರ್ಗಾವಣೆ ಮಾಡಿದ್ದು, ನಕ್ಸಲ್ ನಿಗ್ರಹ ಪಡೆಯ ಡಿಐಜಿಯಾಗಿದ್ದ 2004ರ ಗುಂಪಿನ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಶ್ ಅವರನ್ನು ಈ ಹುದ್ದೆಗೆ ನೇಮಿಸಲಾಗಿದೆ.
2004ರ ಗುಂಪಿನ ಐಪಿಎಸ್ ಅಧಿಕಾರಿಯಾದ ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರು ಈ ಹಿಂದೆಯೂ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು. 2019ರ ಆಗಸ್ಟ್ ಮೊದಲ ವಾರ್ ಹರ್ಷ ಅವರನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಹುದ್ದೆಗೆ ನೇಮಿಸಲಾಗಿತ್ತು. 11 ತಿಂಗಳಿಂದ ಅವರು ಈ ಹುದ್ದೆಯಲ್ಲಿದ್ದಾರೆ.
ಬಿಹಾರ ರಾಜ್ಯದವರಾದ ವಿಕಾಸ್ ಕುಮಾರ್ ವಿಕಾಶ್, 2004ರಿಂದ ರಾಜ್ಯದ ವಿವಿಧೆಡೆ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಸ್ಪಿಯಾಗಿದ್ದರು. ಒಂದು ವರ್ಷದಿಂದ ನಕ್ಸಲ್ ನಿಗ್ರಹ ಪಡೆಯ ಡಿಐಜಿ ಹುದ್ದೆಯಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.