ADVERTISEMENT

ಸುರತ್ಕಲ್ | ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 6:45 IST
Last Updated 5 ಜುಲೈ 2023, 6:45 IST
ಗಾಳಿ ಮಳೆಗೆ ವಿದ್ಯುತ್ ತಂತಿಯ ಮೇಲೆ ಬಿದ್ದ ಮರದ ಟೊಂಗೆ
ಗಾಳಿ ಮಳೆಗೆ ವಿದ್ಯುತ್ ತಂತಿಯ ಮೇಲೆ ಬಿದ್ದ ಮರದ ಟೊಂಗೆ    

ಸುರತ್ಕಲ್ (ದಕ್ಷಿಣ ಕನ್ನಡ): ಮಂಗಳವಾರ ನಡುರಾತ್ರಿ ಸಮುದ್ರ ತೀರದಲ್ಲಿ ಎದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ, ಕುಳಾಯಿ ಪ್ರದೇಶದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಗಾಳಿಯ ಅಬ್ಬರಕ್ಕೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು.

ಬುಧವಾರ ಬೆಳಿಗ್ಗೆ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬುವವರು ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೆ, ಅದನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ನಾರಾಯಣ ಮೂಲ್ಯ ಎಂಬುವವರ ಮನೆಯ ಮೇಲೆ ಮರದ ಟೊಂಗೆ ಬಿದ್ದು ಹಾನಿ ಸಂಭವಿಸಿದೆ.

ಸುಂಟರಗಾಳಿಗೆ ವಿವಿಧೆಡೆ ಮನೆಯ ಚಾವಣಿ ಶೀಟ್ ಗಳು ಹಾರಿ ಹೋಗಿವೆ.

ಮೆಸ್ಕಾಂ ಸಿಬ್ಬಂದಿ ವಿದ್ಯುತ್ ವ್ಯವಸ್ಥೆ ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.