ADVERTISEMENT

ಸುಳ್ಯದಲ್ಲಿ ಗುಂಡಿನ ದಾಳಿ: ಗಾಯಾಳು ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 6:13 IST
Last Updated 6 ಜೂನ್ 2022, 6:13 IST
   

ಸುಳ್ಯ: ಸುಳ್ಯದ ವೆಂಕಟರಮಣ ಸೊಸೈಟಿಯ ಸಮೀಪ ಭಾನುವಾರ ರಾತ್ರಿ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ್ದರಿಂದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.

ತಾಲ್ಲೂಕಿನ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್ ಸಾಯಿ ಎಂಬುವರು ಸುಳ್ಯದ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಹತ್ತಿರವಿರುವ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ತನ್ನ ಕ್ರೇಟಾ ಕಾರನ್ನು ನಿಲ್ಲಿಸಿ, ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು ಕಾರು ಏರುತ್ತಿರುವ ಸಂದರ್ಭ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಹಮ್ಮದ್ ಸಾಯಿ ಅವರ ಕಡೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಗುಂಡಿನ ಚಿಲ್ಡ್ ಹಾರಿದ ಪರಿಣಾಮ ಶಾಯಿಯವರ ಹೊಟ್ಟೆಯ ಸಮೀಪಕ್ಕೆ ಗಾಯವಾಗಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡು ಹಾರಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.