
ಪ್ರಜಾವಾಣಿ ವಾರ್ತೆ
ವಿಟ್ಲ: ರಾಷ್ಟ್ರೀಯ ಹೆದ್ದಾರಿ ಮಾಣಿ- ಮೈಸೂರು ಜಂಕ್ಷನ್ನಲ್ಲಿ ಮೇಲ್ಸೇತುವ ಕೆಳಗಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿವೆ. ವಾಹನ ಚಾಲಕರಿಬ್ಬರೂ ಪಾರಾಗಿದ್ದಾರೆ.
ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ರಸ್ತೆ ಉಬ್ಬು ಹಾಕುವುದರಿಂದ ಅಪಘಾತ ತಪ್ಪಿ ಸಬಹುದು ಎಂದು ಸ್ಥಳೀಯ ರಿಕ್ಷಾ ಚಾಲಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.