ADVERTISEMENT

ಬೀದಿ ಬದಿ ತಿಂಡಿ ವ್ಯಾಪಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 10:44 IST
Last Updated 14 ಮಾರ್ಚ್ 2020, 10:44 IST

ಮಂಗಳೂರು: ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಮಹಾನಗರ ಪಾಲಿಕೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ವ್ಯಾಪ್ತಿಯಲ್ಲಿ ಬೀದಿ ಬದಿ ತಿಂಡಿ, ತಿನಿಸುಗಳ ವ್ಯಾಪಾರವನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.

ಶನಿವಾರದಿಂದಲೇ ಬೀದಿ ಬದಿ ತಿಂಡಿ, ತಿನಿಸುಗಳ ವ್ಯಾಪಾರ ಸ್ಥಗಿತಗೊಳಿಸಬೇಕು. ತಪ್ಪಿದಲ್ಲಿ ಸೋಮವಾರದಿಂದ ಪಾಲಿಕೆಯಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತ ಎಸ್‌. ಅಜಿತ್‌ಕುಮಾರ್ ಹೆಗ್ಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT