ಮಂಗಳೂರು: ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಮೈದಾನ ಮೂರನೇ ಅಡ್ಡರಸ್ತೆಯ ಬಳಿ ಮಾದಕ ದ್ರವ್ಯವನ್ನು ಮಾರುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸರು ಆತನಿಂದ ₹ 4.20 ಲಕ್ಷ ಮೌಲ್ಯದ ಎಂಡಿಎಂಎ ಎಕ್ಸ್ಟಸಿ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಬಜ್ಪೆಯ ಮೊಹಮ್ಮದ್ ಬಷೀರ್ ಷಿಯಾಬ್ (34) ಬಂಧಿತ ಆರೋಪಿ. ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಉಕ್ಕಿನ ಚಾಕು, ತಕ್ಕಡಿ, ಎರಡು ಮೊಬೈಲ್ ಪೋನ್ಗಳು, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾದಕ ದ್ರವ್ಯ ಸೇವನೆ: ಆರೋಪಿ ಬಂಧನ
ಮಾದಕ ದ್ರವ್ಯ ಸೇವಿಸಿದ್ದ ಆರೋಪಿಯನ್ನು ಸೆನ್ ಠಾಣೆಯ ಪೊಲೀಸರು ಕೊಟ್ಟಾರ ಕ್ರಾಸ್ ಬಳಿ ಭಾನುವಾರ ಬಂಧಿಸಿದ್ದಾರೆ.
ಪ್ರದೀಪ್ (24) ಬಂಧಿತ ಆರೋಪಿ. ಆತ ಮಾದ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲೂ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.