ADVERTISEMENT

ಕರ್ನಾಟಕ ಬ್ಯಾಂಕ್‌ನಲ್ಲಿ ಎರಡು ಹಂತದ ಕಾರ್ ಪಾರ್ಕಿಂಗ್ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 16:28 IST
Last Updated 24 ಜನವರಿ 2020, 16:28 IST
ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕರ್ಣಾಟಕ ಬ್ಯಾಂಕ್‌ ಸಂಕೀರ್ಣದಲ್ಲಿ ಎರಡು ಹಂತದ ಪಾರ್ಕಿಂಗ್‌ ಸೌಲಭ್ಯವನ್ನು ಮಹಾಬಲೇಶ್ವರ ಎಂ.ಎಸ್. ಶುಕ್ರವಾರ ಉದ್ಘಾಟಿಸಿದರು.
ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕರ್ಣಾಟಕ ಬ್ಯಾಂಕ್‌ ಸಂಕೀರ್ಣದಲ್ಲಿ ಎರಡು ಹಂತದ ಪಾರ್ಕಿಂಗ್‌ ಸೌಲಭ್ಯವನ್ನು ಮಹಾಬಲೇಶ್ವರ ಎಂ.ಎಸ್. ಶುಕ್ರವಾರ ಉದ್ಘಾಟಿಸಿದರು.   

ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನ ಕರ್ನಾಟಕ ಬ್ಯಾಂಕ್‌ನ ಬ್ಯಾಂಕಿನ ಹಳೆಯ ಮುಖ್ಯ ಕಚೇರಿ ಸಂಕೀರ್ಣದಲ್ಲಿ ಯಾಂತ್ರಿಕವಾಗಿ ಕಾರ್ಯನಿರ್ವಹಿಸುವ ಎರಡು ಹಂತದ ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಆರಂಭಿಸಿದೆ. ಒಟ್ಟು 36 ಕಾರ್ ಪಾರ್ಕಿಂಗ್ ಸ್ಲಾಟ್‌ಗಳಲ್ಲಿ, 18 ಘಟಕಗಳು ನೆಲಮಟ್ಟದಲ್ಲಿವೆ. ಇನ್ನೂ 18 ಘಟಕಗಳು ಮೊದಲ ಹಂತದಲ್ಲಿವೆ.

ಹೊಸ ಸೌಲಭ್ಯವನ್ನು ಉದ್ಘಾಟಿಸಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್., ‘ಲಭ್ಯವಿರುವ ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇದು ಮುಂದಾಲೋಚನೆಯಾಗಿದೆ. ನಗರದ ಈ ಜನನಿಬಿಡ ಸ್ಥಳದಲ್ಲಿ ಹೆಚ್ಚುತ್ತಿರುವ ವಾಹನಗಳ ಪ್ರಮಾಣ ಮತ್ತು ವಿಸ್ತರಣೆಯ ಸ್ಥಳದ ಮಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮರ್ಥ್ಯದ ಬಳಕೆಯಲ್ಲಿ ನಾವು ಒಂದು ಹೆಜ್ಜೆ ಮುಂದಿದ್ದೇವೆ’ ಎಂದು ಹೇಳಿದರು.

ಇದು ದೀರ್ಘಾವಧಿಯಲ್ಲಿ ಪರಿಣಾಮಕಾರಿ ಆಗಲಿದೆ. ಮಂಗಳೂರಿನಲ್ಲಿ ಈ ಸೌಲಭ್ಯವನ್ನು ಆರಂಭಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಲು ಇತರ ಕಾರ್ಪೊರೇಟ್‌ ಸಂಸ್ಥೆಗಳಿಗೆ ಒಂದು ಉದಾಹರಣೆಯನ್ನು ನೀಡಿದಂತಾಗಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಸಮಾರಂಭದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಚಂದ್ರ ವೈ.ವಿ., ಮುಖ್ಯ ವ್ಯವಹಾರ ಅಧಿಕಾರಿ ಗೋಕುಲದಾಸ್ ಪೈ, ಮಹಾಪ್ರಬಂಧಕ ಮುರಳೀಧರ್ ಕೃಷ್ಣ ರಾವ್, ಕಾರ್ಯನಿರ್ವಾಹಕ ಅಧಿಕಾರಿಗಳು, ಸಿಬ್ಬಂದಿ, ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.