ADVERTISEMENT

ಭೂಕಂಪನದಿಂದ ಮನೆಗೆ ಹಾನಿ: ₹45 ಸಾವಿರ ಮೊತ್ತದ ಚೆಕ್‌ ವಿತರಿಸಿದ ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 10:49 IST
Last Updated 7 ಜುಲೈ 2022, 10:49 IST
earth quake
earth quake   

ಮಂಗಳೂರು: ಭೂಕಂಪನದಿಂದ ಹಾನಿಗೊಳಗಾದ ಸುಳ್ಯ ತಾಲ್ಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರು ಗುರುವಾರ ಭೇಟಿ ನೀಡಿದರು.‌

ಮನೆ ಹಾನಿ ಪರಿಹಾರವಾಗಿ ₹45 ಸಾವಿರ ಮೊತ್ತದ ಚೆಕ್‌ ವಿತರಿಸಿದ ಸಚಿವ ಅಶೋಕ್, ₹5 ಲಕ್ಷ ಪರಿಹಾರ ಮಂಜೂರು ಮಾಡುವ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.