ಸುಬ್ರಹ್ಮಣ್ಯ: ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸೋಮವಾರ ಆಗಮಿಸಿ ದೇವರ ದರ್ಶನ ಪಡೆದರು.
ಅವರು ಪತ್ನಿ ಸಾವಿತ್ರಿ ಸಹಿತ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ಅರ್ಚಕ ರಾಜೇಶ್ ಸಚಿವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಹರಸಿದರು. ಜನ್ಮದಿನದ ಪ್ರಯುಕ್ತ ಸಚಿವರು ದೇಗುಲಕ್ಕೆ ಭೇಟಿ ನೀಡಿದ್ದರು.
ನೂತನ ಬ್ರಹ್ಮರಥಕ್ಕೆ ನೆರವೇರುತಿದ್ದ ಬ್ರಹ್ಮರಥದ ವೈದಿಕ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ನರಸಿಂಹ ಗುಡಿ ಹಾಗೂ ಹೊಸಳಿಗಮ್ಮ ದೇವರ ಗುಡಿಗಳಿಗೆ ತೆರಳಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿದರು.
ಖಾಸಗಿಯಾಗಿ ಬಂದಿದ್ದರಿಂದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಲು ನಿರಾಕರಿಸಿದರು. ಅಂಗರಕ್ಷಕ ಪಡೆ ಇಲ್ಲದೆ ಆಗಮಿಸಿದ್ದರು. ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.