ADVERTISEMENT

ಮಂಗಳೂರು: ​ಮೀನು ಸ್ವಚ್ಛಗೊಳಿಸುವ‌ ಟ್ಯಾಂಕಿಗೆ ಇಳಿದ ಐವರು ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 4:48 IST
Last Updated 18 ಏಪ್ರಿಲ್ 2022, 4:48 IST
   

ಮಂಗಳೂರು: ಬಜ್ಪೆಯ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ದುರಂತ ಸಂಭವಿಸಿದ್ದು, ಒಟ್ಟು ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದಿದ್ದ ಪಶ್ಚಿಮ ಬಂಗಾಳದ ಮೂವರು ಕಾರ್ಮಿಕರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್, ಶರಾಫತ್ ಅಲಿ, ಮೀರಾದುಲ್ಲ ಇಸ್ಲಾಂ ಎಂದು ಗುರುತಿಸಲಾಗಿದೆ.

ADVERTISEMENT

ಎಂದಿನಂತೆ ಮೀನು ಸ್ವಚ್ಛಗೊಳಿಸುವ ಬೃಹತ್ ಟ್ಯಾಂಕಿಗೆ ಇಳಿದ8 ಮಂದಿ ಕಾರ್ಮಿಕರು ಸ್ವಚ್ಛಗೊಳಿಸಿದ ಮೀನನ್ನು ತೆಗೆಯುವ ಸಂದರ್ಭದಲ್ಲಿ‌ ಈ ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಮೀನು ಸಂಸ್ಕರಣ ಫ್ಯಾಕ್ಟರಿಯನ್ನು ಇದೀಗ ಬಂದ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.