ADVERTISEMENT

ದಕ್ಷಿಣ ಕನ್ನಡ: ಹಾಜಬ್ಬ ನಿವಾಸಕ್ಕೆ ಶಾಸಕ ಯು.ಟಿ.ಖಾದರ್ ಭೇಟಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 16:09 IST
Last Updated 11 ನವೆಂಬರ್ 2021, 16:09 IST
ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಮನೆಗೆ ಬುಧವಾರ ಬೆಳಗ್ಗೆ ಶಾಸಕ ಯು.ಟಿ.ಖಾದರ್ ಅವರು ಭೇಟಿ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಮನೆಗೆ ಬುಧವಾರ ಬೆಳಗ್ಗೆ ಶಾಸಕ ಯು.ಟಿ.ಖಾದರ್ ಅವರು ಭೇಟಿ   

ಮುಡಿಪು: ಪದ್ಮಶ್ರೀ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಮನೆಗೆ ಬುಧವಾರ ಶಾಸಕ ಯು.ಟಿ.ಖಾದರ್ ಭೇಟಿ ನೀಡಿ ಸನ್ಮಾನಿಸಿದರು.

‘ಹಾಜಬ್ಬ ಅವರಿಗೆ ಕ್ಷೇತ್ರದ ಜನರ ಪರವಾಗಿ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಸಲು ಯೋಚಿಸಲಾಗಿತ್ತು. ಆದರೆ, ಅವರು ನಿರಾಕರಿಸಿದ್ದರಿಂದ ಮನೆಯಲ್ಲೇ ಸರಳ ಕಾರ್ಯಕ್ರಮ ನಡೆಸಲಾಗಿದೆ’ ಎಂದುಖಾದರ್ ಹೇಳಿದರು.

ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಮಂಗಳೂರು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಮುಸ್ತಫಾ ಮಲಾರ್, ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹೈದರ್ ಕೈರಂಗಳ, ಉಳ್ಳಾಲ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್‌, ದೇವದಾಸ್ ಭಂಡಾರಿ, ಇಮ್ತಿಯಾಝ್ ಪಜೀರ್, ಸಮೀರ್ ಪಜೀರ್, ಎನ್.ಎಸ್.ಕ ರೀಂ, ಅಬ್ದುಲ್ ಸತ್ತಾರ್ ಬಾವಲಿಗುರಿ, ಬಶೀರ್ ಉಂಬುದ, ಝಕರಿಯಾ ಮಲಾರ್, ಮುರಳೀಧರ್‌ ಮೋರ್ಲ, ಗಣೇಶ್ ನಾಯ್ಕ್, ಸಿದ್ದೀಕ್ ಪಾರೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.