ADVERTISEMENT

ದೂರು ಹಿಂಪಡೆಯಲು ಸಿ.ಎಂ.ಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 16:39 IST
Last Updated 1 ಅಕ್ಟೋಬರ್ 2021, 16:39 IST
ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಮುರಳೀಧರ್ ನಾಯಕ್, ರಮೇಶ್ ಹೆಗ್ಡೆ, ಭವಾನಿ ಶಂಕರ್, ಚರಿತ್ ಪೂಜಾರಿ ಇದ್ದರು.
ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಮುರಳೀಧರ್ ನಾಯಕ್, ರಮೇಶ್ ಹೆಗ್ಡೆ, ಭವಾನಿ ಶಂಕರ್, ಚರಿತ್ ಪೂಜಾರಿ ಇದ್ದರು.   

ಮಂಗಳೂರು: ಲಾಕ್‌ಡೌನ್‌ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ ಅವರು, ‘ದೇಶದಲ್ಲಿ ಕೋವಿಡ್–2019ನಿಂದ ಜನರು ಆರ್ಥಿಕ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ನ್ಯಾಯಾಲಯ, ಕಚೇರಿ ಅಲೆದಾಟ ಮತ್ತಷ್ಟು ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ, ಸಾರ್ವಜನಿಕರ ಮೇಲೆ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂತೆಗೆಯಲು ಆದೇಶ ನೀಡಬೇಕು ಎಂದು ಮನವಿಯಲ್ಲಿ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT