ಮಂಗಳೂರು: ಮೂಡುಬಿದಿರೆಯ ಶಿರ್ತಾಡಿ ಬಳಿಯ ಔದಾಲ್ ಬಳಿ ಕಾರಿನಲ್ಲಿ ಗೋಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಪೊಲೀಸ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಕಾರಿನಲ್ಲಿ ಗೋಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಕಾರು ನಿಲ್ಲಿಸಲು ಸೂಚಿಸಿದ್ದರು. ಆದರೆ, ಆರೋಪಿಗಳು ಪೊಲೀಸರ ಸೂಚನೆಯನ್ನು ಪಾಲಿಸದೇ, ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾರೆ. ಈ ವೇಳೆ ಕಾರನ್ನು ಬೆನ್ನಟ್ಟಿದ ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಪೊಲೀಸ್ ಫೈರಿಂಗ್ ಕೇಳಿದ ಇಬ್ಬರು ಆರೋಪಿಗಳು ಕಾರು ಹಾಗೂ ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಕಾರು ಹಾಗೂ ಅದರಲ್ಲಿದ್ದ ಆರು ದನಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.