
ಪ್ರಜಾವಾಣಿ ವಾರ್ತೆ
ಬಂಧನ
ಪ್ರಜಾವಾಣಿ ವಾರ್ತೆ
ಮಂಗಳೂರು: ನಗರದಲ್ಲಿ ಕೌಶಲ ತರಬೇತಿ ನೀಡುವ ಸಂಸ್ಥೆಯೊಂದರ ಮಾಲೀಕರಿಗೆ ಅವರ ತಿರುಚಿದ ವಿಡಿಯೊ ಕಳುಹಿಸಿ ಹಣಕ್ಕಾಗಿ ಬೆದರಿಕೆ ಒಡ್ಡಿದ ಆರೋಪಿಯನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನ ಅಭಿಷೇಕ್ ಬಂಧಿತ ಆರೋಪಿ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತ ಆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅವಧಿಯಲ್ಲಿ ಮಾಲೀಕರ ತಿರುಚಿದ ವಿಡಿಯೊ ತೋರಿಸಿ ಹಣಕ್ಕಾಗಿ ಬೆದರಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.