ಸುಳ್ಯ: ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಮೃತಪಟ್ಟ ಘಟನೆ ತಾಲ್ಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.
ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಮತ್ತು ಆಕೆಯ ಮಗು ಮೃತರು.
ತೋಟದಲ್ಲಿನ ಕೆರೆಯ ಬಳಿ ಮಗು ಕಾಲು ಜಾರಿ ಬಿದ್ದಾಗ ರಕ್ಷಿಸಲು ಸಂಗೀತಾ ಕೂಡ ಕೆರೆಗೆ ಹಾರಿದ್ದಾರೆ. ಆದರೆ, ಈಜು ಬಾರದ ಅವರು ಮಗುವಿನೊಂದಿಗೆ ಮೃತಪಟ್ಟಿದ್ದಾರೆ.
ಸಂಗೀತಾ ಅವರ ಮೃತದೇಹ ಮೇಲೆತ್ತಲಾಗಿದ್ದು, ಮಗುವಿನ ಮೃತದೇಹವನ್ನು ತೆಗೆಯುವ ಪ್ರಯತ್ನ ನಡೆಯುತ್ತಿದೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.