ADVERTISEMENT

ಕ್ಷೇತ್ರದ ಅಭಿವೃದ್ಧಿ ಶಕ್ತಿಮೀರಿ ಯತ್ನ

ಬಿಜೆಪಿ ಕಚೇರಿಯಲ್ಲಿ ಸಂಸದ ನಳಿನ್‌ಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 24 ಮೇ 2019, 15:20 IST
Last Updated 24 ಮೇ 2019, 15:20 IST
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಸಂಸದ ನಳಿನ್‌ಕುಮಾರ್ ಕಟೀಲ್‌ ಪೂಜೆ ಸಲ್ಲಿಸಿದರು. ಪ್ರಜಾವಾಣಿ ಚಿತ್ರ
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಸಂಸದ ನಳಿನ್‌ಕುಮಾರ್ ಕಟೀಲ್‌ ಪೂಜೆ ಸಲ್ಲಿಸಿದರು. ಪ್ರಜಾವಾಣಿ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಶಾಸಕ ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ‘ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಸೂಕ್ತ ಆಯ್ಕೆ ಎಂದು ಜನ ಮತ್ತೊಮ್ಮೆ ತೀರ್ಮಾನಿಸಿದ್ದಾರೆ. ಮೋದಿಯವರ ಸುವರ್ಣಯುಗ ಮುಂದುವರಿಯುವ ಅಪೇಕ್ಷೆಯಿಂದ ಜನ ಬಿಜೆಪಿಗೆ ಮತ ನೀಡಿದ್ದಾರೆ. ಮೋದಿಯವರು ಪ್ರಧಾನಿಯಾಗಲಿದ್ದು, ಭ್ರಷ್ಟಾಚಾರರಹಿತ, ನಿಷ್ಕಳಂಕ ವ್ಯಕ್ತಿತ್ವದ, ಪ್ರಾಮಾಣಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಮುಂದಿನ ಐದು ವರ್ಷ ಹೊಸ ಅಭಿವೃದ್ಧಿಗೆ ಕಾರಣವಾಗಲಿದೆ’ ಎಂದು ಹೇಳಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ‘ಜನರು ಮೂರನೇ ಬಾರಿ ನೀಡಿರುವ ಆರ್ಶೀವಾದವನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸುತ್ತೇನೆ. ಶಕ್ತಿಮೀರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ADVERTISEMENT

ಶಾಸಕರಾದ ಸಂಜೀವ್ ಮಠಂದೂರು, ಡಾ.ವೈ. ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಬ್ರಿಜೇಶ್ ಚೌಟ, ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ವಸಂತ ಜೆ.ಪೂಜಾರಿ, ಸುಧಾಕರ ಜೋಷಿ, ಜಗದೀಶ್ ಶೆಟ್ಟಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಶ್ರೀನಿವಾಸ ಶೇಟ್, ಪ್ರಭಾಮಾಲಿನಿ, ರಾಜೇಂದ್ರ, ಪೂರ್ಣಿಮಾ, ಪೂರ್ಣಿಮಾ ರಾವ್, ಚರಿತ ಪೂಜಾರಿ, ಹರಿಣಿ, ಕಾತ್ಯಾಯಿನಿ ಸೇರಿದಂತೆ ಹಲವು ಕಾರ್ಯಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.