ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಅಡಿಯಲ್ಲಿ 19 ಅಂಗವಿಕಲರಿಗೆ ಒಟ್ಟು ₹21 ಲಕ್ಷ ಮೌಲ್ಯದ ಮೂರು ಚಕ್ರದ ಸ್ಕೂಟರ್ ವಿತರಿಸಿತು.
ಶುಕ್ರವಾರ ಪಡೀಲ್ನ ಪ್ರಜಾಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಇಲಾಖೆ ಸಹಯೋಗದಲ್ಲಿ ಸ್ಕೂಟರ್ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಶ್ಯಾಮಪ್ರಸಾದ್ ಕಾಮತ್, ಮಾನವ ಸಂಪನ್ಮೂಲ ವಿಭಾಗದ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಆಡಳಿತ ವಿಭಾಗದ ಜನರಲ್ ಮ್ಯಾನೇಜರ್ ಮನೋಜ್ ಕುಮಾರ್ ಎ, ಜಿಲ್ಲಾ ಅಂಗವಿಕಲ ಅಧಿಕಾರಿ ಮನೀಷ್ ನಾಯಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.