ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು–2019ರ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’ಗಾಗಿ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿಗೆ ಆಯ್ಕೆಯಾದ ಕವನ ಸಂಗ್ರಹಕ್ಕೆ ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಸ್ಪರ್ಧೆಯ ವಿವರಗಳನ್ನು ಪಡೆಯಲು ಆಸಕ್ತರು ₹5 ಮುಖಬೆಲೆಯ ಅಂಚೆ ಚೀಟಿ ಹಚ್ಚಿದ ಸ್ವವಿಳಾಸ ಇರುವ ಕವರನ್ನು ಪ್ರಧಾನ ಕಾರ್ಯದರ್ಶಿ, ಕಾಂತಾವರ ಕನ್ನಡ ಸಂಘ (ರಿ), ಅಂಚೆ: ಕಾಂತಾವರ - 574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ ಇವರಿಗೆ ಕಳುಹಿಸಿಕೊಡಬೇಕು.
ಹಸ್ತಪ್ರತಿ ಸ್ವೀಕಾರದ ಕೊನೆಯ ದಿನ ಆಗಸ್ಟ್ 30. ಮಾಹಿತಿಗೆ ಸದಾನಂದ ನಾರಾವಿ (ಮೊಬೈಲ್ 90089 78366) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.